ಎಲ್ಲರ ಸಹಕಾರದೊಂದಿಗೆ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತೇನೆ – ಕ್ಯಾ.ಬ್ರಿಜೇಶ್‌ ಚೌಟ

ಮಂಗಳೂರು: ಅಭಿವೃದ್ಧಿಯನ್ನು ಆದ್ಯತೆಯಾಗಿರಿಸಿ ದ.ಕ.ಜಿಲ್ಲೆಯಲ್ಲಿ ಹೊಸಪರ್ವ, ಹೊಸಕನಸು, ಹೊಸ ಆಶೋತ್ತರಗಳನ್ನು ಜನರ ಮಧ್ಯೆ ಹುಟ್ಟಿಸುತ್ತೇನೆ. ಎಲ್ಲರ ಸಹಕಾರದೊಂದಿಗೆ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತೇನೆ ಎಂದು ದ.ಕ ಲೋಕಸಭಾ ಕ್ಷೇತ್ರದ ನೂತನ ವಿಜಯೀ ಅಭ್ಯರ್ಥಿ ಕ್ಯಾ.ಬ್ರಿಜೇಶ್‌ ಚೌಟ ಹೇಳಿದ್ದಾರೆ.

ದ.ಕ.ಜಿಲ್ಲೆಯಲ್ಲಿ ಗೆಲುವು ಸಾಧಿಸಿದ ಬಳಿಕ ಮಾಧ್ಯಮದೊಂದಿಗೆ ಮಾತಾನಾಡಿದ ಬ್ರಿಜೇಶ್ ಚೌಟ ನವಯುಗ, ನವಪಥದ ಆಧಾರದಲ್ಲಿ ಹಿಂದುತ್ವಕ್ಕೆ ಬದ್ಧತೆಯಿರಿಸುತ್ತೇನೆ. ದ.ಕ.ಜಿಲ್ಲೆಯ ಬಿಜೆಪಿಯ ಗೆಲುವು, ಇದು ಮೋದಿಯವರ, ಹಿಂದುತ್ವದ, ಸಂಘಟನೆಯ ಕಾರ್ಯಕರ್ತರ, ಜಿಲ್ಲಾಧ್ಯಕ್ಷರ ಗೆಲುವು. ಸತ್ಯ, ಧರ್ಮ, ನ್ಯಾಯ, ಹಿಂದುತ್ವದ ಆಧಾರದಲ್ಲಿ ನಾವು ಜಿಲ್ಲೆಯಲ್ಲಿ ಸ್ಪರ್ಧೆ ಮಾಡಿದ್ದೆವು.
ತುಳುನಾಡಿನ ದೈವ ದೇವರ ಆಶೀರ್ವಾದದ ಬಲದಿಂದ, ಕಾರ್ಯಕರ್ತರ ಪರಿಶ್ರಮ, ಸಂಘಟನೆಯ ಹಿರಿಯರ ಮಾರ್ಗದರ್ಶನದಿಂದ, ರಾಜ್ಯ ಹಾಗೂ ಕೇಂದ್ರದ ನಾಯಕರ ಬೆಂಬಲದೊಂದಿಗೆ ಈ ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸುವ ಮೂಲಕ ಗೆಲುವನ್ನು ಸಾಧಿಸಿದ್ದೇವೆ ಎಂದು ಹೇಳಿದರು.

LEAVE A REPLY

Please enter your comment!
Please enter your name here