ಶಾಸಕ ಈಶ್ವರ್‌ ಪ್ರದೀಪ್‌ ನಿವಾಸಕ್ಕೆ ಕಲ್ಲು ತೂರಾಟ – ದೂರು ದಾಖಲು

ಮಂಗಳೂರು/ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಶಾಸಕ ಈಶ್ವರ್‌ ಪ್ರದೀಪ್‌ ನಿವಾಸಕ್ಕೆ ಕಲ್ಲು ತೂರಾಟ ನಡೆದಿದೆ. ಚಿಕ್ಕಬಳ್ಳಾಪುರದ ಕಂದವಾರದಲ್ಲಿರುವ ಶಾಸಕರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಪರಿಣಾಮ ಮನೆಯ ಕಿಟಕಿ ಗಾಜು ಪುಡಿಪುಡಿಯಾಗಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್‌ ಕಾಂಗ್ರೇಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗಿಂತ ಒಂದೇ ಒಂದು ಮತ ಹೆಚ್ಚಿಗೆ ಪಡೆದರೂ ರಾಜೀನಾಮೆ ನೀಡುವುದಾಗಿ ಹೇಳಿ ಡಾ.ಸುಧಾಕರ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು. ಚುನಾವಣೆಯಲ್ಲಿ ಡಾ.ಸುಧಾಕರ್‌ ಗೆಲುವು ಸಾಧಿಸಿದ್ದು ಬಿಜೆಪಿ ಕಾರ್ಯಕರ್ತರು ಶಾಸಕ ಈಶ್ವರ್‌ ಪ್ರದೀಪ್‌ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಇದೇ ಹಿನ್ನಲೆಯಲ್ಲಿ ಶಾಸಕರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರ ಪೊಲೀಸರು ಸಳ್ಥಕ್ಕೆ ಭೇಟಿ ನೀಡಿ, ಸ್ಥಳೀಯ ಸಿಸಿಟಿವಿ ಗಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here