ಸ್ನೇಹಿತನ ಬರ್ತ್‌ಡೇ ಪಾರ್ಟಿಯಲ್ಲಿ ಯುವಕನ ಹತ್ಯೆ

ಮಂಗಳೂರು (ಬೆಳಗಾವಿ): ಹೊಟ್ಟೆಗೆ ಚಾಕುವಿನಿಂದ ಇರಿದು ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಯರಗಟ್ಟಿಯ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ.

ಎಂಎಸ್‌ಡಬ್ಲ್ಯೂ ವ್ಯಾಸಂಗ ಮಾಡುತ್ತಿದ್ದ ಬಸವರಾಜ ಮುದ್ದಣ್ಣವ‌ರ್ (23) ಕೊಲೆಯಾದ ಯುವಕ. ಮಲ್ಲಿಕಾರ್ಜುನ ಎನ್ನುವ ಸ್ನೇಹಿತನ ಹುಟ್ಟುಹಬ್ಬ ಆಚರಣೆ ಹಿನ್ನೆಲೆಯಲ್ಲಿ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದ ಪಾರ್ಟಿಗೆ ಬಸವರಾಜ ಹೋಗಿದ್ದ. ಈ ಸಂದರ್ಭ ಬರ್ತ್‌ಡೇ ಪಾರ್ಟಿಗೆ ಆಗಮಿಸಿದ್ದ ಸ್ನೇಹಿತರ ನಡುವೆ ಗಲಾಟೆಯಾಗಿ, ಮಾತಿಗೆ ಮಾತು ಬೆಳೆದು ಬಸವರಾಜನ ಹೊಟ್ಟೆಗೆ ಚಾಕುವಿನಿಂದ ಇರಿಯಲಾಗಿದೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಬಸವರಾಜನನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಆತ ಸಾವನ್ನಪ್ಪಿದ್ದಾನೆ.

LEAVE A REPLY

Please enter your comment!
Please enter your name here