ಮಧ್ಯರಾತ್ರಿ ಭೀಕರ ಅಪಘಾತ- ಮೂವರು ಸ್ಥಳದಲ್ಲೇ ಸಾವು- ಮರಕ್ಕೆ ಸಿಲುಕಿ ನೇತಾಡಿದ ಮೃತದೇಹ

ಮಂಗಳೂರು/ಚಿಕ್ಕಬಳ್ಳಾಪುರ: ಭೀಕರ ಕಾರು ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ‌ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಓರ್ವ ಪ್ರಾಣಾಪಾಯದಿಂದ‌ ಪಾರಾಗಿದ್ದಾನೆ.

ಕಳೆದ ರಾತ್ರಿ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಕಾಲುವೆಗೆ ಕಾರು ಉರುಳಿದೆ. ಅಪಘಾತದ ತೀವ್ರತೆಗೆ ಓರ್ವ ಪ್ರಯಾಣಿಕ ಮರಕ್ಕೆ ಸಿಲುಕಿ ನೇತಾಡಿದ್ದಾನೆ. ಬ್ರಿಜಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಸ್ಕಾಂ ಸಿಬ್ಬಂದಿ    ಕೆಪಿಟಿಸಿಎಲ್ ವೇಣಗೋಪಾಲ್ (34), ಶ್ರೀಧರ್ (35), ಬೆಸ್ಕಾಂ ಲೈನ್​ಮ್ಯಾನ್ ಮಂಜಪ್ಪ (35) ಮೃತ ದುರ್ದೈವಿಗಳು. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here