ಪ್ರಜಾಪ್ರಭುತ್ವದ ಹಬ್ಬ ಚುನಾವಣೆಗೆ ತೆರೆ- ತೆರವುಗೊಂಡ ನೀತಿ ಸಂಹಿತೆ

ಮಂಗಳೂರು/ದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆ ಮತ್ತು ಕೆಲವು ರಾಜ್ಯಗಳಲ್ಲಿ ನಡೆದ ವಿಧಾನಸಬಾ ಚುನಾವಣೆ ಮುಕ್ತಾಯವಾದ  ಹಿನ್ನೆಲೆಯಲ್ಲಿ ಮಾರ್ಚ್ 16 ರಿಂದ ಜಾರಿಗೆ ತರಲಾಗಿದ್ದ ಮಾದರಿ ನೀತಿ ಸಂಹಿತೆಯನ್ನು ತೆರವುಗೊಳಿಸಿರುವುದಾಗಿ ಚುನಾವಣಾ ಆಯೋಗ ಹೇಳಿದೆ.

ಲೋಕಸಭಾ ಚುನಾವಣೆ ಮತ್ತು ಅರುಣಾಚಲ ಪ್ರದೇಶ, ಸಿಕ್ಕಿಂ, ಒಡಿಶಾ, ಆಂಧ್ರ ಪ್ರದೇಶ ರಾಜ್ಯಗಳಿಗೆ ಇದೇ ವೇಳೆ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಹೀಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮಾದರಿ ನೀತಿ ಸಂಹಿತೆಯನ್ನು ಅಂತ್ಯಗೊಳಿಸಲಾಗಿದೆ ಎಂದು ಚುನಾವಣಾ ಆಯೋಗವು ಕೇಂದ್ರ ಸಂಪುಟ ಕಾರ್ಯದರ್ಶಿ ಮತ್ತು ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದೆ.

LEAVE A REPLY

Please enter your comment!
Please enter your name here