ಬೋಳಿಯಾರ್‌ ಪ್ರಕರಣ – ಆಸ್ಪತ್ರೆಗೆ ಭೇಟಿ – ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಿದ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು(ಬಂಟ್ವಾಳ): ಪ್ರಧಾನ ಮಂತ್ರಿ ನರೇಂದ್ರ ಮೋದಿ ಪದಗ್ರಹಣದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ಸಂಭ್ರಮಾಚರಣೆ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಹರೀಶ್ ಅಂಚನ್‌ ಹಾಗೂ ವಿನೋದ್ ಅವರ ಮೇಲೆ ಇನ್ನೊಂದು ಕೋಮಿನ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹರೀಶ್ ಮತ್ತು ವಿನೋದ್ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಜಿಲ್ಲೆಯಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಸರಣಿ ಹಲ್ಲೆಗಳು ನಡೆಯುತ್ತಿದ್ದು ಇದರ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಕ್ಯಾ. ಬ್ರಿಜೇಶ್ ಚೌಟ ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here