3 ವರ್ಷದ ಹೆಣ್ಣು ಮಗುವನ್ನು ಕೊಂದ ಮಹಾತಾಯಿ – ಆಸ್ಪತ್ರೆಗೆ ದಾಖಲಿಸಿದಾಗ ಕೃತ್ಯ ಬೆಳಕಿಗೆ 

ಮಂಗಳೂರು/ಬೆಂಗಳೂರು: ತಾಯಿಯೊಬ್ಬಳು ತಾನು ಹೆತ್ತ ಮೂರು ವರ್ಷದ ಮಗುವನ್ನು ವೇಲ್ ನಿಂದ ಬಿಗಿದು ಕೊಂದ ಘಟನೆ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಬೆಳಕಿಗೆ ಬಂದಿದೆ. ರಮ್ಯಾ (35) ಎಂಬಾಕೆ ತನ್ನ ಮಗು ಪ್ರೀತಿಕಾಳನ್ನು ವೇಲ್ ನಿಂದ ಬಿಗಿದು ಕೊಂದಿದ್ದು ಆಕೆಯನ್ನು ಸುಬ್ರಮಣ್ಯಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತೆ ರಮ್ಯ ಗೃಹಿಣಿಯಾಗಿದ್ದು, ಈಕೆಯ ಪತಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು ​ನಾರ್ವೆಯಲ್ಲಿ ಉದ್ಯೋಗದಲ್ಲಿದ್ದಾರೆ. ರಮ್ಯ ತನ್ನ ಅತ್ತೆ-ಮಾವನ ಜೊತೆಗೆ ವಾಜರಹಳ್ಳಿಯಲ್ಲಿ ವಾಸ ಮಾಡುತ್ತಿದ್ದಳು. ರಮ್ಯಾ ತನ್ನ ಮೂರು ವರ್ಷ ಹತ್ತು ತಿಂಗಳ ಮಗುವನ್ನು ಮಾನಸಿಕ ಅಸ್ವಸ್ಥೆ ಎಂಬ ಕಾರಣಕ್ಕೆ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. 11 ವರ್ಷಗಳ ಹಿಂದೆ ಮದುವೆಯಾಗಿದ್ದ ರಮ್ಯಳಿಗೆ ಇಬ್ಬರು ಅವಳಿ ಹೆಣ್ಣು ಮಕ್ಕಳು. ಈ ಪೈಕಿ 3 ವರ್ಷ 10 ತಿಂಗಳ ಪ್ರೀತಿಕಾಳು ಮಾನಸಿಕ ಅಸ್ವಸ್ಥಳಾಗಿದ್ದಳು. ಮತ್ತೊಂದು ಮಗು ಸಡೃಢವಾಗಿದ್ದು, ಶಾಲೆಗೆ ಹೋಗುತಿತ್ತು.ಇದರಿಂದ ನೊಂದ ರಮ್ಯಾ ಮಗುವನ್ನು ವೇಲಿನಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಆ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾಳೆ. ಅನುಮಾನ‌ಪಟ್ಟ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರಣೆ ವೇಳೆ ಕೊಲೆ ಮಾಡಿರುವುದಾಗಿ ರಮ್ಯಾ ಒಪ್ಪಿಕೊಂಡಿದ್ದಾಳೆ. ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here