ಕಲ್ಲಿನ ಕ್ವಾರಿನಲ್ಲಿ ಅವಳಿ ಮಕ್ಕಳಿಬ್ಬರು ನೀರುಪಾಲು

ಮಂಗಳೂರು/ಕಾಸರಗೋಡು: ಅವಳಿ ಮಕ್ಕಳಿಬ್ಬರು ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ(ಜೂ.17) ಸಂಜೆ ಚೀಮೇನಿ ಕನಿಯಾಂದಲದಲ್ಲಿ ನಡೆದಿದೆ.

ಚೀಮೇನಿ ಕನಿಯಾಂದಲದಲ್ಲಿ ರಾಧಾಕೃಷ್ಣರವರ ಮಕ್ಕಳಾದ ಸುದೇವ್(10) ಮತ್ತು ಶ್ರೀದೇವಿ(10) ಮೃತಪಟ್ಟವರು. ಚೀಮೇನಿ ಸರಕಾರಿ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿಗಳಾಗಿರುವ ಇಬ್ಬರೂ ಸೈಕಲ್ ನಲ್ಲಿ ಆಟವಾಡಲು ತೆರಳಿದ್ದು, ತಡವಾದರೂ ಮನೆಗೆ ಬಾರದ ಹಿನ್ನಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದಾಗ ಕ್ವಾರಿಯ ಸಮೀಪ ಸೈಕಲ್ ಪತ್ತೆಯಾಗಿದೆ. ಸಂಶಯಗೊಂಡು ಮನೆಯವರು ಹಾಗೂ ಪರಿಸರವಾಸಿಗಳು ಶೋಧ ನಡೆಸಿದಾಗ ಕ್ವಾರಿಗೆ ಬಿದ್ದಿರುವುದು ಕಂಡುಬಂದಿದೆ. ಇಬ್ಬರನ್ನು ಮೇಲಕ್ಕೆತ್ತಿ ಸಮೀಪದ ಆಸ್ಪತ್ರೆಗೆ ಕೊಂಡೊಯ್ದಿದರೂ ಇಬ್ಬರೂ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.  

LEAVE A REPLY

Please enter your comment!
Please enter your name here