ಕಾಲೇಜು ಬಸ್ ಗೆ ಬೆಂಕಿ – ಸುಟ್ಟು ಕರಕಲಾದ 5 ಬಸ್ಸುಗಳು

ಮಂಗಳೂರು/ಬೆಂಗಳೂರು: ಬೆಂಕಿ ತಗುಲಿ ಖಾಸಗಿ ನರ್ಸಿಂಗ್ ಕಾಲೇಜಿನ 5 ಬಸ್ ಗಳು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ.

ಹಳೆ ಬಸ್ ಗಳು ಕೆಟ್ಟು ಹೋಗಿರುವ ಹಿನ್ನಲೆ ಖಾಲಿ ಜಾಗದಲ್ಲಿ ನಿಲ್ಲಿಸಲಾಗಿತ್ತು. ಇಂದು(ಶನಿವಾರ) ಮಧ್ಯಾಹ್ನ 2:40ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ ಎಂದು ಹೇಳಲಾಗಿದೆ. ದುರ್ಘಟನೆ ನಡೆದ ತಕ್ಷಣವೇ ಕಾಲೇಜು ಆಡಳಿತ ಮಂಡಳಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ರಾಜಗೋಪಾಲ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here