ಕೆ.ಎಸ್‌.ಆರ್‌.ಟಿ.ಸಿ ಬಸ್‌ನಲ್ಲಿ ಮಹಿಳೆಯ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

ಮಂಗಳೂರು(ಬೆಂಗಳೂರು): ಕೆ.ಎಸ್‌.ಆರ್‌.ಟಿ.ಸಿ ಬಸ್‌ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ಸೇರಿದ 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್‌ ಬ್ಯಾಗ್‌ ಕಳವಾಗಿದೆ.

ನಗರದ ಬ್ಯಾಂಕ್‌ನ ಲಾಕರ್‌ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳಿರುವ ವಿವಿಧ ನಮೂನೆಯ ಚಿನ್ನದ ಒಡವೆಗಳನ್ನು ಕೌಟುಂಬಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಮನೆಗೆ ತಂದು ಹ್ಯಾಂಡ್‌ಬ್ಯಾಗ್‌ನಲ್ಲಿ ಹಾಕಿ ಜೂ.19ರಂದು ಬೆಳಗ್ಗೆ  ಮಂಗಳೂರಿನಿಂದ ಕೆಎಸ್‌ಆರ್‌ಟಿಸಿ ತನ್ನ ಇತರ ಲಗೇಜ್‌ ಗಳೊಂದಿಗೆ ಐರಾವತ ಬಸ್‌ ನಲ್ಲಿ ಬೆಂಗಳೂರಿಗೆ ಪ್ರಯಾಣಿಸಿದ್ದರು.

ಹಾಸನ ತಲುಪಿದಾಗ ಅವರ ಹ್ಯಾಂಡ್‌ಬ್ಯಾಗ್‌ ನಲ್ಲಿದ್ದ ಚಿನ್ನಾಭರಣಗಳು ಕಳವಾಗಿರುವುದು ಗಮನಕ್ಕೆ ಬಂದಿದೆ. ಮಂಗಳೂರು – ಹಾಸನ ನಡುವೆ ಅವರ ಪಕ್ಕದಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ನಡು ವಯಸ್ಸಿನ ಮಹಿಳೆ ಕಳವು ಮಾಡಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಈ ಕುರಿತು ಉರ್ವ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

LEAVE A REPLY

Please enter your comment!
Please enter your name here