ಸಿಡಿಲು ಮತ್ತು ಮಳೆ – ಸಿಡಿಲು ಬಡಿದು ಒಂಬತ್ತು ಮಂದಿ ಮೃತ್ಯು

ಮಂಗಳೂರು/ಪಟ್ನಾ: ಕಳೆದ 24 ಗಂಟೆಗಳಲ್ಲಿ ಮಳೆಯಾಗಿದ್ದು, ಬಿಹಾರದ 6 ಜಿಲ್ಲೆಗಳಲ್ಲಿ ಸಿಡಿಲು ಬಡಿದು 9 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೆಹಾನಾಬಾದ್ ಜಿಲ್ಲೆಯಲ್ಲಿ ಮೂವರು, ಮಾಧೇಪುರ ಜಿಲ್ಲೆಯಲ್ಲಿ ಇಬ್ಬರು, ಪೂರ್ವ ಚಂಪಾರಣ್, ರೋಹ್ತಾಸ್, ಸರನ್ ಮತ್ತು ಸುಪೌಲ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ. ಘಟನೆಗೆ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ. ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ವಿಪತ್ತು ನಿರ್ವಹಣಾ ಪಡೆ ನೀಡಿರುವ ಸೂಚನೆಗಳನ್ನು ಪಾಲಿಸುವಂತೆ ಸಿಎಂ ಜನರಿಗೆ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here