ಶಾಸಕ ಭರತ್ ಶೆಟ್ಟಿ ಒಬ್ಬ ಚಿಲ್ಲರೆ ರಾಜಕಾರಣಿ – ಐವನ್ ಡಿ’ಸೋಜಾ

ಮಂಗಳೂರು: ಶಾಸಕ ಭರತ್ ಶೆಟ್ಟಿ ಒಬ್ಬ ಚಿಲ್ಲರೆ ರಾಜಕಾರಣಿ. ಸಂಸ್ಕೃತಿ ಇಲ್ಲದ ರಾಜಕಾರಣಿ. ಶಾಸಕ ಸ್ಥಾನಕ್ಕೆ ಅಗೌರವ ತೋರಿಸಿ ಶಾಸಕರ ಮಾನ ಹರಾಜು ಮಾಡಿದ್ದಾರೆ. ಶಾಸಕನಾಗಲೂ ಅನರ್ಹನಾಗಿರುವ ವ್ಯಕ್ತಿ. ರಾಹುಲ್ ಗಾಂಧಿಯವರಿಗೆ ‘ಕೆನ್ನೆಗೆ ಬಾರಿಸಬೇಕು’ ಎಂದು ಹೇಳುವುದರ ಜತೆಗೆ ನಾಯಿಗೆ ಹೋಲಿಸಿದ್ದಾರೆ. ನಾಯಿಗೆ ಇರುವ ಬುದ್ಧಿಯೂ ಶಾಸಕ ಭರತ್ ಶೆಟ್ಟಿಗೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಆರೋಪಿಸಿದರು.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶಸ್ತ್ರಾಸ್ತ್ರ ಹಿಡಿಯುವ ಬಗ್ಗೆಯೂ ಪ್ರಚೋದನಕಾರಿಯಾಗಿ ಮಾತನಾಡಿದ್ದು, ಅವರ ಮೇಲೆ ಪೊಲೀಸ್ ಆಯುಕ್ತರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ, ತಕ್ಷಣ ಅವರನ್ನು ಬಂಧಿಸಬೇಕು. ಪ್ರಧಾನಿಯವರಿಗೇ ರಾಹುಲ್ ಗಾಂಧಿಯವರನ್ನು ಎದುರಿಸಲು ತಾಕತ್ತಿಲ್ಲ, ಇನ್ನು ಚಿಲ್ಲರೆ ಗಿರಾಕಿಯಾಗಿರುವ ಭರತ್ ಶೆಟ್ಟಿ ಯಾವ ಲೆಕ್ಕ. ಮುಂದಿನ ಆರು ತಿಂಗಳು ಕೂಡಾ ಕೇಂದ್ರ ಸರಕಾರ ಉಳಿಯುವುದಿಲ್ಲ. ಅದಕ್ಕೆ ಹಾದಿ ಬೀದಿಯಲ್ಲಿ ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ತಾಕತ್ತಿದ್ದರೆ ಅವರಿಗೆ ಹೊಡೆದು ನೋಡಲಿ ಸವಾಲು‌ ಹಾಕಿದ್ದಾರೆ.

LEAVE A REPLY

Please enter your comment!
Please enter your name here