ನೇಪಾಳದಲ್ಲಿ ಭೂಕುಸಿತ – 7 ಭಾರತೀಯರು ಸೇರಿದಂತೆ 65 ಜನ ನಾಪತ್ತೆ

ಮಂಗಳೂರು/ಕಠ್ಮಂಡು: ನೇಪಾಳದ ತ್ರಿಶೂಲಿ ನದಿ ಸಮೀ‍ಪ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದ್ದು 7 ಭಾರತೀಯರು ಸೇರಿದಂತೆ 65 ಜನ ನಾಪತ್ತೆಯಾಗಿದ್ದಾರೆ.

65 ಜನ ಪ್ರಯಾಣಿಕರಿದ್ದ ಎರಡು ಬಸ್ಸುಗಳು ನದಿಯಲ್ಲಿ ಕೊಚ್ಚಿ ಹೋಗಿವೆ ಎನ್ನಲಾಗುತ್ತಿದೆ. ಇಬ್ಬರು ಚಾಲಕರು ಸೇರಿದಂತೆ ಬಸ್‌ಗಳಲ್ಲಿ ಇದ್ದ 65 ಜನ ಪ್ರಯಾಣಿಕರು ನಾಪತ್ತೆಯಾಗಿದ್ದಾರೆ. ಶುಕ್ರವಾರ ಬೆಳಗಿನ ಜಾವ 3.30ರ ಸುಮಾರಿಗೆ ಮದನ್-ಆಶ್ರಿತ್ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ ಎಂದು ನೇಪಾಳದ ಪೊಲೀಸರು ತಿಳಿಸಿದ್ದಾರೆ. ಘಟನೆ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಶೋಧ ಕಾರ್ಯಕ್ಕೆ ಮಳೆ ಅಡ್ಡಿಯಾಗಿದೆ ಎಂದು ಮದನ್‌ ನಗರದ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here