ವಿಕಲಚೇತನರ ಅಪಹಾಸ್ಯ – ಮೂವರು ಮಾಜಿ ಭಾರತೀಯ ಕ್ರಿಕೆಟಿಗರ ವಿರುದ್ಧ ದೂರು ದಾಖಲು

ಮಂಗಳೂರು/ದೆಹಲಿ: ಭಾರತೀಯ ಮಾಜಿ ಕ್ರಿಕೆಟ್ ಪಟುಗಳಾದ ಯುವರಾಜ್ ಸಿಂಗ್, ಹರ್ಭಜನ್ ಮತ್ತು ಸುರೇಶ್ ರೈನಾ ವಿರುದ್ಧ ದೂರು ದಾಖಲಾಗಿದೆ. ಅಂಗವಿಕಲರಿಗೆ ಉದ್ಯೋಗ ಉತ್ತೇಜನದ ರಾಷ್ಟ್ರೀಯ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಅರ್ಮಾನ್ ಅಲಿ ಅವರು ಅಮರ್ ಕಾಲೋನಿ ಪೊಲೀಸ್ ಠಾಣೆಯ ಎಸ್‌ಎಚ್‌ಒಗೆ ದೂರು ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ ನಲ್ಲಿ ವಿಕಲಚೇತನರಿಗೆ ಅಪಹಾಸ್ಯ ಮಾಡಿ ವಿಡಿಯೋ ಹರಿಯಬಿಟ್ಟಿರುವುದರ ವಿರುದ್ಧ ಈ ದೂರು ದಾಖಲಾಗಿದೆ. ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಫೈನಲ್‌ನಲ್ಲಿ ಪಾಕಿಸ್ತಾನ ಚಾಂಪಿಯನ್ಸ್ ವಿರುದ್ಧ ಭಾರತ ಚಾಂಪಿಯನ್ಸ್ ಐದು ವಿಕೆಟ್‌ಗಳ ಜಯ ಸಾಧಿಸಿದ ನಂತರ ಮಾಜಿ ಕ್ರಿಕೆಟಿಗರು, ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ್ದರು. ಇದು ವಿಕಲಚೇತನರ ಸಂಘಟನೆಯ ಆಕ್ರೋಶಕ್ಕೆ ಕಾರಣವಾಗಿತ್ತು. ಅಮರ್ ಕಾಲೋನಿ ಪೊಲೀಸ್ ಠಾಣೆ ದೂರು ಸ್ವೀಕರಿಸಿದ್ದು, ಹೆಚ್ಚಿನ ತನಿಖೆಗಾಗಿ ಈ ದೂರನ್ನು ಜಿಲ್ಲೆಯ ಸೈಬರ್ ಸೆಲ್‌ಗೆ ರವಾನಿಸಲಾಗಿದೆ. 

LEAVE A REPLY

Please enter your comment!
Please enter your name here