ಕ್ಷುಲ್ಲಕ ಕಾರಣಕ್ಕೆ ಗುಂಡು ಹಾರಿಸಿ ಪತ್ನಿಯ ಕೊಲೆ – ಬಂದೂಕಿನೊಂದಿಗೆ ಪೊಲೀಸರಿಗೆ ಶರಣಾದ ಪತಿ 

ಮಂಗಳೂರು/ಮಡಿಕೇರಿ: ಕ್ಷುಲ್ಲಕ ಕಾರಣಕ್ಕಾಗಿ ಪತ್ನಿ ಮೇಲೆ ಪತಿಯೊಬ್ಬ ಮನಸೋ ಇಚ್ಛೆ ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಕೊಡಗಿನಲ್ಲಿ ನಡೆದಿದೆ.

ಕೊಡಗಿನ ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೋಪಣ್ಣ ಎಂಬಾತ ತನ್ನ ಪತ್ನಿ ಶಿಲ್ಪಾ(36) ಎಂಬಾಕೆಗೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಬಳಿಕ ಬಂದೂಕಿನೊಂದಿಗೆ ಠಾಣೆಗೆ ಬಂದು ಶರಣಾಗಿದ್ದಾನೆ. ​

ಶಿಲ್ಪಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ವಿರಾಜಪೇಟೆ ಪೋಲೀಸರು ಭೇಟಿ ನೀಡಿದ್ದಾರೆ. ಘಟನೆ ಕುರಿತಂತೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here