ರೈಲ್ವೆ ಹಳಿ ಮೇಲೆ ಮಣ್ಣು ಕುಸಿತ -ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದು

ಮಂಗಳೂರು (ಹಾಸನ): ಮಲೆನಾಡು ‌ಭಾಗದಲ್ಲಿ ಮಳೆಯು ನಿರಂತರವಾಗಿ ಮುಂದುವರೆದಿದ್ದು, ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ-ಯಡಕುಮೇರಿ ನಡುವಿನ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿ ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಬೆಂಗಳೂರು-ಹಾಸನ-ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರವನ್ನು ಕೂಡ ಬಂದ್‌ ಮಾಡಲಾಗಿದೆ.ಕಿಲೋ ಮೀಟರ್ ನಂಬರ್ 63ರಲ್ಲಿ ಹಳಿಯ ಮೇಲೆ‌ ಮಣ್ಣು ಕುಸಿತವಾಗಿದ್ದು, ಸ್ಥಳಕ್ಕೆ ಧಾವಿಸಿದ ರೈಲ್ವೆ ಇಲಾಖೆ ಸಿಬ್ಬಂದಿಗಳು ರೈಲ್ವೆ ಇಲಾಖೆ ಅಧಿಕಾರಿಗಳಿಂದ ರೈಲು ಮಾರ್ಗ ಬದಲಿಸಲಾಗಿದೆ.

LEAVE A REPLY

Please enter your comment!
Please enter your name here