ದೊಡ್ಡ ತಪ್ಪಲಿನಲ್ಲಿ ಭೂ ಕುಸಿತ – ಶಿರಾಡಿ ಘಾಟ್‌ ನಲ್ಲಿ ವಾಹನ ಸಂಚಾರ ಬಂದ್

ಮಂಗಳೂರು (ನೆಲ್ಯಾಡಿ): ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ದೊಡ್ಡ ತಪ್ಪಲು ಎಂಬಲ್ಲಿ ಗುಡ್ಡ ಕುಸಿತಗೊಂಡು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ವಾಹನಗಳು ಕೆಸರಿನಲ್ಲಿ ಸಿಲುಕಿಗೊಂಡಿರುವ ಘಟನೆ ಜು.30ರಂದು ನಡೆದಿದೆ. ಇದರಿಂದಾಗಿ ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆಗಿದೆ.

ಶಿರಾಡಿ ಘಾಟ್ ನ ಸಕಲೇಶಪುರ – ಮಾರ್ನಳ್ಳಿ ನಡುವಿನ ದೊಡ್ಡ ತಪ್ಪಲು ಎಂಬಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತಗೊಂಡಿದೆ. ಮಣ್ಣು ಕುಸಿದು ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನದ ಮೇಲೆ ಬಿದ್ದಿದೆ. ಇನ್ನೋವಾ, ಟಿಪ್ಪರ್, ಗ್ಯಾಸ್ ಟ್ಯಾಂಕರ್ ಸಹಿತ ಕಾರೊಂದರ ಮೇಲೆ ಮಣ್ಣು ಕುಸಿದು ಬಿದ್ದಿದ್ದು ವಾಹನಗಳು ಕೆಸರು ಮಣ್ಣಿನಲ್ಲಿ ಸಿಲುಕಿಕೊಂಡಿವೆ. ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಮಣ್ಣು ಮತ್ತು ವಾಹನ ತೆರವು ಕಾರ್ಯಾಚರಣೆ ನಡೆಯುತ್ತಿದ್ದು ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರವನ್ನು  ನಿರ್ಬಂಧಿಸಲಾಗಿದೆ.

LEAVE A REPLY

Please enter your comment!
Please enter your name here