ಬೀದಿಬದಿ ವ್ಯಾಪಾರಸ್ಥರ ವಿರುದ್ದ ಮುಂದುವರಿದ ಟೈಗರ್‌ ಕಾರ್ಯಾಚರಣೆ

ಮಂಗಳೂರು: ನಿರಂತರವಾಗಿ ಮ.ನ.ಪಾ ಬೀದಿಬದಿ ವ್ಯಾಪಾರಸ್ಥರ ಅಂಗಡಿಗಳನ್ನು ತೆರವುಗೊಳಿಸುವ ಟೈಗರ್ ಕಾರ್ಯಾಚರಣೆಯನ್ನು ಇಂದು ಮುಂದುವರಿಸಿದೆ. ಕಳೆದ 3-4 ದಿನಗಳಿಂದ ನಡೆಯುತ್ತಿರುವ ಈ ಕಾರ್ಯಾಚರಣೆಯನ್ನು ಬೀದಿಬದಿ ವ್ಯಾಪಾರಸ್ಥರ ಸಂಘಟನೆ ಖಂಡಿಸಿದೆ. ಇಂದು ಸ್ಟೇಟ್ ಬ್ಯಾಂಕ್ ಬಳಿ ಮ.ನ.ಪಾ ಅಧಿಕಾರಿಗಳ ಜೊತೆ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಬೀದಿಬದಿ ವ್ಯಾಪಾರಸ್ಥರ ಸಂಘಟನೆ ಮುಖಂಡರು ಒತ್ತಾಯಿಸಿದ್ದಾರೆ. ಪಾಲಿಕೆಯವರು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸದ ಹಿನ್ನಲೆಯಲ್ಲಿ ಆಯುಕ್ತರ ಹಾಗೂ ಮೇಯರ್ ವಿರುದ್ದ ಪ್ರತಿಭಟನೆ ನಡೆಸಲು ಮುಂದಾದಾಗ ಪ್ರತಿಭಟನಾಕಾರರನ್ನು ಪೋಲಿಸ್ ವಶಕ್ಕೆ ಪಡೆದಿದ್ದಾರೆ.

LEAVE A REPLY

Please enter your comment!
Please enter your name here