ರಾತ್ರೋರಾತ್ರಿ ಕುಸಿದ ಕಾಳಿ ಬ್ರಿಡ್ಜ್ – ಲಾರಿ ನದಿಪಾಲು – ಚಾಲಕ ಪವಾಡ ಸದೃಶ ಪಾರು

ಮಂಗಳೂರ (ಕಾರವಾರ) ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಕುಸಿದಿದೆ. 60 ವರ್ಷ ಹಳೆಯದಾದ ಸೇತುವೆ ಇದಾಗಿದ್ದು, ಭಾರೀ ಮಳೆಗೆ ರಾತ್ರಿ 1 ಗಂಟೆ ಸುಮಾರಿಗೆ ಒಮ್ಮಿಂದೊಮ್ಮೆಲೆಕುಸಿದು ಬಿದ್ದಿದೆ.

ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ನಡುವಿನ ಸಂಪರ್ಕ ಸೇತುವೆ ಇದಾಗಿದ್ದು, ಸೇತುವೆಯ ಒಂದು ಭಾಗ ಕುಸಿದಿದೆ. ಈ ವೇಳೆ ಸೇತುವೆ ಮೇಲೆ ಚಲಿಸುತ್ತಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಬಾಲಮುರುಗನ್(37) ಸಮೇತ ನದಿಗೆ ಬಿದ್ದಿದೆ.
ನದಿಯಲ್ಲಿ ಬಿದ್ದ ಲಾರಿಯ ಮುಂಭಾಗದ ಗ್ಲಾಸ್ ಒಡೆದು ಕ್ಯಾಬಿನ್ ಮೇಲೆ ನಿಂತು ಚಾಲಕ ಬಾಲ ಮುರುಗನ್ ರಕ್ಷಣೆಗೆ ಕೂಗಿದ್ದರು. ಬೀಟ್ ಪೊಲೀಸರ ಮುಂಜಾಗೃತೆಯಿಂದ ಲಾರಿ ಚಾಲಕನ ಪ್ರಾಣ ಉಳಿದಿದೆ.

ಸ್ಥಳೀಯ ಮೀನುಗಾರರು ಹಾಗೂ ಪೊಲೀಸ್ ಸಿಬ್ಬಂದಿ ಸೇರಿ ಬೋಟ್ ಮೂಲಕ ಲಾರಿ ಚಾಲಕನನ್ನ ರಕ್ಷಿಸಿದ್ದಾರೆ. ಗೋವಾದಿಂದ ಹುಬ್ಬಳ್ಳಿ ಕಡೆ ಮಧ್ಯರಾತ್ರಿ ತೆರಳುತಿದ್ದ ತಮಿಳುನಾಡು ಮೂಲದ ಟ್ರಕ್ ಸೇತುವೆ ಮೇಲೆ ಚಲಿಸುತ್ತಿದ್ದಂತೆ ಸೇತುವೆಯ ಮೊದಲ ಭಾಗ ಕುಸಿದಿದೆ. ನಂತರ ಮೂರು ಕಡೆ ಕುಸಿದಿದೆ. ಟ್ರಕ್ ಚಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ
ಸೇತುವೆ ಮೇಲೆ ಸಂಚರಿಸುತ್ತಿದ್ದ ಬೇರೆ ವಾಹನಗಳು ನದಿಗೆ ಬಿದ್ದಿದೆಯೇ ಎಂಬ ಶಂಕೆ ವ್ಯಕ್ತವಾಗಿದ್ದು ಶೋಧ ಕಾರ್ಯ ನಡೆಯುತ್ತಿದೆ.

LEAVE A REPLY

Please enter your comment!
Please enter your name here