ಕಸಬಾ ಬೆಂಗ್ರೆ ಶಾಲೆ ದತ್ತು ಸ್ವೀಕಾರ – ಭಂಡಾರಿ ಫೌಂಡೇಶನ್ ಮೂಲಕ ದತ್ತು ಪಡೆದ ಮಂಜುನಾಥ್‌ ಭಂಡಾರಿ

ಮಂಗಳೂರು: ಸರ್ಕಾರಿ ಶಾಲೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಬೆಂಗ್ರೆ ಕಸಬಾ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯನ್ನು ಭಂಡಾರಿ ಫೌಂಡೇಶನ್ ಮೂಲಕ ದತ್ತು ಸ್ವೀಕರಿಸಿದ್ದಾರೆ.

ಇದು ರಾಜ್ಯದ ಇತಿಹಾಸದಲ್ಲೇ ಪೂರ್ಣ ಪ್ರಮಾಣದ ದತ್ತು ಸ್ವೀಕಾರವಾಗಿದೆ. ಈ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತಮ ವಾತಾವರಣ ನಿರ್ಮಿಸುವ ಜೊತೆಗೆ ಹೊಸ ಕಟ್ಟಡ, ವಿದ್ಯುತ್, ಸ್ವಚ್ಛ ನೀರು, ಕ್ರೀಡಾ ಸೌಲಭ್ಯ ಸೇರಿದಂತೆ ಎಲ್ಲಾ ಮೂಲ ಸೌಕರ್ಯ ಅಭಿವೃದ್ಧಿಪಡಿಸಲಾಗುವುದು ಎಂದು ಭಂಡಾರಿ ಫೌಂಡೇಶನ್ ಸ್ಥಾಪಕ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

ಬೆಂಗ್ರೆ ಕಸಬ ಸರಕಾರಿ ಶಾಲೆಗೆ 60ಕ್ಕೂ ಅಧಿಕ ವರ್ಷಗಳ ಇತಿಹಾಸ ಹೊಂದಿದ್ದು, ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಶಾಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 800ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಹುಕಾಲದ ಬೇಡಿಕೆಯನ್ನು ಮಂಜುನಾಥ ಭಂಡಾರಿ ಈಡೇರಿಸಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಪದ್ಮರಾಜ್ ಪೂಜಾರಿ, ಸುಭಾಶ್ಚಂದ್ರ ಶೆಟ್ಟಿ, ಕೆ.ಕೆ.ಶಾಹುಲ್ ಹಮೀದ್, ಲಾರೆನ್ಸ್ ಡಿಸೋಜ, ಅಶ್ರಫ್ ಬೆಂಗ್ರೆ, ಮುಖ್ಯ ಶಿಕ್ಷಕಿಯರಾದ ಶೋಭಾ.ಬಿ, ಸಂತೋಷ್ ಕುಮಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here